ಪ್ರತಿಮೆಗಳನ್ನು ಭಗ್ನಗೊಳಿಸುವ ಭಂಜಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ:

ಅಲಹಾಬಾದ್, ಮಾ.31-ಗಣ್ಯಾತಿಗಣ್ಯರ ಪ್ರತಿಮೆಗಳನ್ನು ಭಗ್ನಗೊಳಿಸುವ ಭಂಜಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ್ದರೂ ಕಿಡಿಗೇಡಿಗಳಿಂದ ಪುತ್ಥಳಿಗಳ ಧ್ವಂಸ ಕುಕೃತ್ಯಗಳು ಮುಂದುವರಿದಿದೆ.
ಉತ್ತರ ಪ್ರದೇಶದ ಅಲಹಾಬಾದ್‍ನ ಜಾನ್ಸಿ ತ್ರಿವೇಣಿಪುರಂನಲ್ಲಿ ಇಂದು ಬೆಳಗ್ಗೆ ದುಷ್ಕರ್ಮಿಗಳು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಭಗ್ನಗೊಳಿಸಿದ್ದಾರೆ. ಪುತ್ಥಳಿಯ ಶಿರವನ್ನು ಕೆಳಗೆ ಉರುಳಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಈ ಘಟನೆ ನಂತರ ಅಲ್ಲಿ ಕೆಲಕಾಲ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ದುಷ್ಕರ್ಮಿಗಳಿಗಾಗಿ ಪೆÇಲೀಸರು ಬಲೆ ಬೀಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ