ಅಫ್ಜಲ್‍ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪದೆ ಹಿನ್ನಲೆ: ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂ.ವೈ.ಪಾಟೀಲ್ ರನ್ನು ಸೆಳೆಯಲು ಕಾಂಗ್ರೆಸ್ ಬಲೆ

ಬೆಂಗಳೂರು,ಏ.1-ಅಫ್ಜಲ್‍ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಂತೆ ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ವೈ.ಪಾಟೀಲ್ ಅವರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಬಲೆ ಬೀಸಿದೆ.

ಎಂ.ವೈ.ಪಾಟೀಲ್ ಅವರು ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿದ್ದು, ಈ ಬಾರಿ ಕ್ಷೇತ್ರದಿಂದ ಸ್ಪರ್ಧಿಸಲು ಭಾರೀ ಉತ್ಸುಕರಾಗಿದ್ದರು. ಕಾಂಗ್ರೆಸ್‍ನಿಂದ ಬಂದಿರುವ ಮಾಲೀಕಯ್ಯ ಗುತ್ತೇದಾರ್‍ಗೆ ಬಿಜೆಪಿಯಿಂದ ಕಣಕ್ಕಿಳಿಸಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಬೇಸತ್ತಿರುವ ಎಂ.ವೈ.ಪಾಟೀಲ್ ಬಿಜೆಪಿ ತೊರೆಯಲು ನಿರ್ಧರಿಸಿದ್ದು, ಈ ಸಂಬಂಧ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ.

ಎಂ.ವೈ.ಪಾಟೀಲ್ ಅವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಂಡು ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿಗಳೂ ಕೂಡ ಒಲವು ವ್ಯಕ್ತಪಡಿಸಿದ್ದು, ಎಂ.ವೈ.ಪಾಟೀಲ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ