ಮೈಸೂರು ಆಯ್ತು.. ಶಾ ಇಂದು ಹುಬ್ಬಳ್ಳಿ ಭೇಟಿ

ಬೆಂಗಳೂರು: ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ದೆಹಲಿಗೆ ತೆರಳಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತೆ ಇಂದು ರಾಜ್ಯಕ್ಕೆ ಮರಳಲಿದ್ದಾರೆ.
ಇಂದು ಹುಬ್ಬಳ್ಳಿ ಭಾಗದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ, ಸಂಸದ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಅಮಿತ್ ಶಾಗೆ ಜತೆಯಾಗಲಿದ್ದಾರೆ.
ಇಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅಮಿತ್ ಶಾ ಹುಬ್ಬಳ್ಳಿ ಮತದಾರರನ್ನು ಸೆಳೆಯವ ಯತ್ನ ನಡೆಸಲಿದ್ದಾರೆ. ಈ ಮೂಲಕ ಕಳೆದ ಒಂದು ವಾರದಿಂದ ಕರ್ನಾಟಕದಲ್ಲೇ ಬೀಡುಬಿಟ್ಟಿರುವ ಅಮಿತ್ ಶಾ ಈ ವಾರ ಕೂಡಾ ಬಹುತೇಕ ರಾಜ್ಯ ರಾಜಕೀಯಕ್ಕೆ ಹೆಚ್ಚಿನ ಸಮಯ ಮೀಸಲಿಡಲಿದ್ದಾರೆ. ಟಿಕೆಟ್ ಹಂಚಿಕೆ ಮುಂತಾದ ಮಹತ್ವದ ವಿಚಾರಗಳ ಬಗ್ಗೆ ಅವರು ಈ ವಾರ ತೀರ್ಮಾನ ಕೈಗೊಳ್ಳಲಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ