ಅಂಗಡಿಯೊಂದಕ್ಕೆ ನುಗ್ಗಿದ ಮೂವರು ದರೋಡೆಕೋರರು ಮಾಲೀಕನಿಗೆ ಚಾಕು ತೋರಿಸಿ ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ದರೋಡೆ

ಬೆಂಗಳೂರು, ಏ.3- ಅಂಗಡಿಯೊಂದಕ್ಕೆ ನುಗ್ಗಿದ ಮೂವರು ದರೋಡೆಕೋರರು ಮಾಲೀಕನಿಗೆ ಚಾಕು ತೋರಿಸಿ ಬೆದರಿಸಿ ಅಂಗಡಿಯಲ್ಲಿದ್ದ ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಆರ್‍ಟಿ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರ್‍ಟಿ ನಗರದ ದಿಣ್ಣೂರಿನಲ್ಲಿ ಗೋಪಿನಾಥ್ ಎಂಬುವವರಿಗೆ ಸೇರಿದ ಅಂಗಡಿಯಿದ್ದು, ರಾತ್ರಿ 10.30ರ ಸಮಯದಲ್ಲಿ ಇವರು ಅಂಗಡಿಯಲ್ಲಿದ್ದರು. ಈ ವೇಳೆ ಒಂದೇ ಬೈಕ್‍ನಲ್ಲಿ ಬಂದ ಮೂವರು ದರೋಡೆಕೋರರು ಅಂಗಡಿಯೊಳಗೆ ನುಗ್ಗಿ ಗೋಪಿನಾಥ್ ಅವರಿಗೆ ಚಾಕು ತೋರಿಸಿ ಬೆದರಿಸಿ ವಿವಿಧ ವಸ್ತುಗಳನ್ನು ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ.
ಈ ಸಂಬಂಧ ಆರ್‍ಟಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ