ಜೆಡಿಎಸ್ ಪಕ್ಷ ಸೇರುವುದು ನಟ ಸುದೀಪ್ ಅವರ ವಿವೇಚನೆಗೆ ಬಿಟ್ಟದ್ದು – ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಹಾಸನ, ಏ.3- ಜೆಡಿಎಸ್ ಪಕ್ಷ ಸೇರುವುದು ಅಥವಾ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರದಲ್ಲಿ ಪಾಲ್ಗೊಳ್ಳುವ ವಿಚಾರ ಖ್ಯಾತ ಚಲನಚಿತ್ರ ನಟ ಸುದೀಪ್ ಅವರ ವಿವೇಚನೆಗೆ ಬಿಟ್ಟದ್ದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುದೀಪ್ ಮತ್ತು ನನ್ನ ನಡುವೆ ಮೊದಲಿನಿಂದಲೂ ಅವಿನಾಭಾವ ಸಂಬಂಧವಿದೆ. ನಿನ್ನೆ ಸುದೀಪ್ ನನ್ನನ್ನು ಭೇಟಿಯಾಗಿ ರಾಜಕೀಯ ವಿಚಾರದ ಬಗ್ಗೆಯೂ ಸಮಾಲೋಚನೆ ಮಾಡಿದ್ದಾರೆ. ರಾಜ್ಯದ ಜನರ ಸಮಸ್ಯೆ ಪರಿಹರಿಸಲು ಉತ್ತಮ ನಿರ್ಧಾರ ಕೈಗೊಳ್ಳಬೇಕೆಂದು ಸುದೀಪ್ ಅವರಿಗೆ ಸಲಹೆ ನೀಡಿದ್ದೇನೆ ಎಂದರು. ಸುದೀಪ್ ಅವರಿಗೆ ನನ್ನ ಮೇಲೆ ಸಾಕಷ್ಟು ನಂಬಿಕೆ ಇದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಸಲಹೆ ನೀಡಿದ್ದಾರೆ. ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ