ಚುನಾವಣಾ ಆಯೋಗದ ನಿರ್ದೇಶನದ ಮೇಲೆ ರಾಜ್ಯ ಸರ್ಕಾರ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜಿ.ಜಗದೀಶ್ ಅವರನ್ನು ವರ್ಗಾವಣೆ :

ಮೈಸೂರು, ಏ.3-ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಮೇಲೆ ರಾಜ್ಯ ಸರ್ಕಾರ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜಿ.ಜಗದೀಶ್ ಅವರನ್ನು ವರ್ಗಾವಣೆ ಮಾಡಿದೆ.
ಜಗದೀಶ್ ಸ್ಥಾನಕ್ಕೆ ಕೆ.ಎಚ್.ಜಗದೀಶ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿರುವ ಕೆ.ಎಚ್.ಜಗದೀಶ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ಮೈಸೂರು ಪಾಲಿಕೆಯಿಂದ ವರ್ಗಾವಣೆಯಾಗಿರುವ ಜಿ.ಜಗದೀಶ್ ಅವರಿಗೆ ಯಾವುದೇ ಸ್ಥಳ ನಿಗದಿಪಡಿಸಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ