ಕೂಲಿ ಹಣದ ವಿಚಾರವಾಗಿ ಇಬ್ಬರು ಕೂಲಿ ಕಾರ್ಮಿಕರ ನಡುವೆ ಜಗಳವಾಗಿ ಚಾಕುವಿನಿಂದ ಇರಿತ

ಬೆಂಗಳೂರು, ಏ.3- ಕೂಲಿ ಹಣದ ವಿಚಾರವಾಗಿ ಇಬ್ಬರು ಕೂಲಿ ಕಾರ್ಮಿಕರ ನಡುವೆ ಜಗಳವಾಗಿ ಚಾಕುವಿನಿಂದ ಇರಿತಕ್ಕೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಹಿನ್ನೆಲೆಯಲ್ಲಿ ಆರೋಪಿಯನ್ನು ಕಲಾಸಿಪಾಳ್ಯ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ತರಕಾರಿ ಮಾರ್ಕೆಟ್‍ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ನರಸಿಂಹ (42) ಮತ್ತು ಮತ್ತೊಬ್ಬ ಕೂಲಿ ಕಾರ್ಮಿಕ ಜಾವಿದ್ ನಡುವೆ ಹಣದ ವಿಚಾರದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 1.45ರ ಸಮಯದಲ್ಲಿ ಜಗಳವಾಗಿತ್ತು.

ಜಗಳದ ಒಂದು ಹಂತದಲ್ಲಿ ಜಾವಿದ್ ಚಾಕುವಿನಿಂದ ನರಸಿಂಹ ಅವರ ಕುತ್ತಿಗೆಗೆ ಬಲವಾಗಿ ಇರಿದು ಪರಾರಿಯಾಗಿದ್ದನು. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದ ಈತನನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನರಸಿಂಹ ನಿನ್ನೆ ಮೃತಪಟ್ಟಿದ್ದಾರೆ.

ಘಟನಾ ಸಂಬಂಧ ಆರೋಪಿ ಜಾವಿದ್‍ನನ್ನು ಕಲಾಸಿಪಾಳ್ಯ ಠಾಣೆ ಪೆÇಲೀಸರು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ