ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ನೋಡಲು ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ದಂಡೇ ಹರಿದುಬಂದಿದೆ

ಚಿತ್ರದುರ್ಗ, ಏ.4-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ನೋಡಲು ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ದಂಡೇ ಹರಿದುಬಂದಿದೆ.

ಹೊಳಲ್ಕೆರೆ ಕೊಟ್ರೆನಂಜಪ್ಪ ಮೈದಾನದಲ್ಲಿ ಕಾಂಗ್ರೆಸ್ ಜನಾಶೀರ್ವಾದ ಸಮಾವೇಶ ಏರ್ಪಡಿಸಿದ್ದು, ಮಧ್ಯಾಹ್ನ ರಾಹುಲ್‍ಗಾಂಧಿ ಆಗಮಿಸುವ ಮುನ್ನವೇ ವಿವಿಧ ತಾಲೂಕುಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಜನಸಾಗರವೇ ಹರಿದುಬಂದಿತ್ತು.

ಮೈದಾನದ ಸುತ್ತ ರಾಹುಲ್‍ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮುಖಂಡರ ಆಳೆತ್ತರದ ಕಟೌಟ್‍ಗಳು, ಫ್ಲೆಕ್ಸ್, ಬ್ಯಾನರ್‍ಗಳನ್ನು ಹಾಕಲಾಗಿತ್ತು.
ಸುಮಾರು 10 ಸಾವಿರ ಕಾರ್ಯಕರ್ತರಿಗೆ ಮೈದಾನದಲ್ಲಿ ಆಸನ ವ್ಯವಸ್ಥೆ ಮಾಡಿದ್ದರೆ, ವಿಐಪಿಗಳು, ಪ್ರಮುಖ ಮುಖಂಡರಿಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.

ಸುತ್ತಲೂ ಬ್ಯಾರಿಕೇಡ್ ಹಾಕಿ ಅತ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿಯೇ ಮೈದಾನದ ಒಳಗಡೆ ಬಿಡಲಾಯಿತು.

ಅಗ್ನಿಶಾಮಕ ವಾಹನ, ಕುಡಿಯುವ ಶುದ್ಧ ನೀರು, ಊಟ-ತಿಂಡಿ ವ್ಯವಸ್ಥೆಯನ್ನು ಕಾರ್ಯಕರ್ತರಿಗೆ ಮಾಡಲಾಗಿತ್ತು.
ತಾಲೂಕುಗಳು, ಗ್ರಾಮಾಂತರ ಪ್ರದೇಶಗಳಿಂದ ಕಾರ್ಯಕರ್ತರನ್ನು ಕರೆತರಲು ಬಸ್‍ಗಳನ್ನು ವ್ಯವಸ್ಥೆ ಮಾಡಲಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ