ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಮರು ಸೇರ್ಪಡೆಗೆ ವಿರೋಧಿಸಿ ಕಾರ್ಯಕರ್ತ ಬಾಬು ಜಗದಾಳೆ ಆತ್ಮಹತ್ಯೆಗೆ ಯತ್ನ

ವಿಜಯಪುರ, ಏ.4-ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಮರು ಸೇರ್ಪಡೆಗೆ ವಿರೋಧಿಸಿ ಜಿಲ್ಲಾ ಬಿಜೆಪಿ ಕಚೇರಿ ಎದುರು ಕಾರ್ಯಕರ್ತ ಬಾಬು ಜಗದಾಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಪಾಲಿಕೆ ಸದಸ್ಯ ಗೋಪಾಲ್ ಘಟಕಾಂಬಳೆ ನೇತೃತ್ವದಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸಿ ಬಿಜೆಪಿ ವರಿಷ್ಠರು ಯತ್ನಾಳ್ ಅವರನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳದಂತೆ ಆಗ್ರಹಿಸಿದರು.

ಅಪ್ಪು ಪಟ್ಟಣ ಶೆಟ್ಟಿ ಅವರ ಬೆಂಬಲಿಗ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಬಾಬು ಜಗದಾಳೆ ಈ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿದರು.
ಯಾವುದೇ ಕಾರಣಕ್ಕೂ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದು ಎಂದು ಒತ್ತಾಯಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ವಿಠ್ಠಲ್ ಕಟಕ ದೊಂಡ ವಿರುದ್ದವೂ ಘೋಷಣೆಗಳನ್ನು ಆಕ್ರೋಶ ವ್ಯಕ್ತಪಡಿಸಲಾಯಿತು. ಬೇಡವೇ… ಬೇಡ ಯತ್ನಾಳ್ ಬೇಡ. ಬಿಜೆಪಿಗೆ ಯತ್ನಾಳ್ ಬೇಡ ಎಂದು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ