ಬೆಂಗಳೂರು,ಏ.4- ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್ನಲ್ಲಿ ಹಿಂಬಾಲಿಸಿದ ಸರಗಳ್ಳರು 15 ಗ್ರಾಂ ಸರ ಎಗರಿಸಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗೆಳೆಯರ ಬಳಗದ 14ನೇ ಕ್ರಾಸ್ ಸ್ಕೇಟಿಂಗ್ ಮೈದಾನ ಬಳಿಯ ಈಜುಕೊಳದ ಸಮೀಪ ಶಾರದಾ ಎಂಬುವರು ರಾತ್ರಿ 9.55ರಲ್ಲಿ ನಡೆದು ಹೋಗುತ್ತಿದ್ದರು.
ಈ ವೇಳೆ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ಇಬ್ಬರು ಸರಗಳ್ಳರು ಸಮಯ ಸಾಧಿಸಿ ಶಾರದಾ ಅವರ ಕೊರಳಲ್ಲಿದ್ದ 15 ಗ್ರಾಂ ತೂಕದ ಸರ ಎಗರಿಸಿ ಪರಾರಿಯಾಗಿದ್ದಾರೆ.
ತಕ್ಷಣ ಸಮಯಕ್ಕಾಗಿ ಕೂಗಿಕೊಂಡರೂ ಪ್ರಯೋಜನವಾಗಿಲ್ಲ. ಸುದ್ದಿ ತಿಳಿದ ಮಹಾಲಕ್ಷ್ಮಿ ಲೇಔಟ್ ಠಾಣೆ ಪೆÇಲೀಸರು ಎಲ್ಲ ಕಡೆ ನಾಕಾಬಂಧಿ ಮಾಡಿ ಕಾರ್ಯಾಚರಣೆ ನಡೆಸಿದರಾದರೂ ಸರಗಳ್ಳರು ಸುಳಿವು ಪತ್ತೆಯಾಗಿಲ್ಲ.
ಮಹಾಲಕ್ಷ್ಮಿ ಲೇಔಟ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.