ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ

ಬೆಂಗಳೂರು, ಏ.4- ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆಯಾಗಿದ್ದು, ಇವರ ಬಗ್ಗೆ ಮಾಹಿತಿಯಿದ್ದಲ್ಲಿ ಕೂಡಲೇ ಸುಬ್ರಹ್ಮಣ್ಯನಗರ ಪೆÇಲೀಸ್ ಠಾಣೆಗೆ ತಿಳಿಸಲು ಕೋರಲಾಗಿದೆ.
ಮಾ.27ರಂದು ಮಧ್ಯಾಹ್ನ 2.30ರಲ್ಲಿ ಪ್ರಕಾಶ್ ಅಲಿಯಾಸ್ ವಿಜಯಪ್ರಕಾಶ್ (45) ಎಂಬುವರು ಹೊರಗೆ ಹೋಗಿದ್ದು, ಮನೆಗೆ ವಾಪಸ್ ಆಗಿಲ್ಲ ಎಂದು ಇವರ ಪತ್ನಿ ಮಂಜುಳಾ ಪೆÇಲೀಸರಿಗೆ ದೂರು ನೀಡಿದ್ದಾರೆ.
ಇವರ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಕೂಡಲೇ ಸಮೀಪದ ಠಾಣೆಗಾಗಲೀ ಅಥವಾ ಕಂಟ್ರೋಲ್ ರೂಂಗಾಗಲಿ ತಿಳಿಸಬೇಕೆಂದು ಮನವಿ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ