ಭದ್ರತಾ ಪಡೆಗಳ ಕಾರ್ಯಾಚರಣೆ: ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರು ಹತ

ಲತೇಹರ್‌,ಏ.4

ಜಾರ್ಖಂಡ್‌ನಲ್ಲಿ ಬುಧವಾರ ಬೆಳಗ್ಗೆ ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರು ಹತರಾಗಿದ್ದಾರೆ.
ಲತೇಹರ್‌ ಜಿಲ್ಲೆಯ ಸೇರೆಂದಾಗ್‌ ಅರಣ್ಯದಲ್ಲಿ ಇಂದು ಪೊಲೀಸರು ಮತ್ತು ಸಿಆರ್‌ಪಿಎಫ್‌ ಸಿಬ್ಬಂದಿಯ ಜಂಟಿ ತಂಡ ಹಾಗೂ ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ. ಇದರಲ್ಲಿ ಐವರು ನಕ್ಸಲರನ್ನು ಸೆದೆಬಡಿಯವಲ್ಲಿ ಭದ್ರತಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಎನ್‌‌ಕೌಂಟರ್‌ ಇನ್ನೂ ನಡೆಯುತ್ತಿದೆ ಎಂದು ತಿಳಿಸಿರುವ ಎಸ್‌‌ಪಿ ಪ್ರಶಾಂತ್‌ ಆನಂದ್‌, ಹತ ಐವರ ಮೃತದೇಹಗಳು ಮತ್ತು ಮೂರು ಎಕೆ 47 ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ