ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತ ಸುಪ್ರೀಂ ತೀರ್ಪು ವಿರೋಧಿಸಿ 5 ದಿನಗಳ ಕಾಲ ಬೆಂಗಳೂರು ವಿಶ್ವವಿದ್ಯಾನಿಲಯ ಬಂದ್

 

ಬೆಂಗಳೂರು, ಏ.4-ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸುಪ್ರೀಂಕೋರ್ಟ್‍ನ ತೀರ್ಪು ವಿರೋಧಿಸಿ ಇಂದಿನಿಂದ ಐದು ದಿನಗಳ ಕಾಲ ಬೆಂಗಳೂರು ವಿಶ್ವವಿದ್ಯಾನಿಲಯ ಬಂದ್ ಆಚರಿಸಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ವಿವಿ ಶಿಕ್ಷಕರ ಪರಿಷತ್ ಹೇಳಿದೆ.
ಪರಿಷತ್ ಅಧ್ಯಕ್ಷ ಬಿ.ಸಿ.ಮೈಲಾರಪ್ಪ, ಪೆÇ್ರ.ಎಚ್.ಡಿ.ಮೂರ್ತಿ ಪತ್ರಿಕಾಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸಂಬಂಧ ಸುಪ್ರೀಂ ನೀಡಿರುವ ತೀರ್ಪಿನಿಂದ ದೇಶದ ದಲಿತರು ಆತಂಕಕ್ಕೊಳಗಾಗಿದ್ದಾರೆ. ಕೂಡಲೇ ಮರುಪರಿಶೀಲನೆ ಮಾಡಬೇಕು. ಇದಕ್ಕಾಗಿ ಆಗ್ರಹಿಸಿ ವಿವಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರಜ್ಞಾವಂತ ನಾಗರಿಕರು, ಸಮಾಜಸುಧಾರಕರು, ಪ್ರಗತಿಪರರು, ಕ್ರಿಯಾಶೀಲರು ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ