ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರ್ ಚುನಾವಣಾ ಅಖಾಡಕ್ಕೆ ಸಿದ್ಧ

ಹುಬ್ಬಳ್ಳಿ, ಏ.5- ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರ್ ಚುನಾವಣಾ ಅಖಾಡಕ್ಕೆ ಸಿದ್ಧರಾಗಿದ್ದಾರೆ.
ಬಾಗಲಕೋಟೆ ಕ್ಷೇತ್ರದಲ್ಲಿ ಎಚ್.ವೈ.ಮೇಟಿಗೆ ಟಾಂಗ್ ಕೊಡಲು ಮುಂದಾಗಿದ್ದು, ಪಕ್ಷೇತರವಾಗಿ ಚುನಾವಣೆಗೆ ನಿಲ್ಲಲು ತಯಾರಿ ನಡೆಸಿದ್ದಾರೆ.
ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಆಸೆ-ಆಮಿಷಗಳಿಗೆ ಮಣಿಯುವುದಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಚುನಾವಣೆಗೆ ಸ್ಪರ್ಧಿಸದಂತೆ ಮೇಟಿ ಬೆಂಬಲಿಗರಿಂದ ಬೆದರಿಕೆ ಇದೆ ಎಂದು ಹೇಳಿದ ವಿಜಯಲಕ್ಷ್ಮಿ ಅವರು ನಾನು ಹಣಕ್ಕಾಗಿ ಸ್ಪರ್ಧೆಗೆ ಇಳಿಯುತ್ತಿಲ್ಲ. ನನಗೆ ಮೇಟಿ ಅವರು ಒಂದು ರೂಪಾಯಿ ಕೊಟ್ಟಿಲ್ಲ. ನಾನು ಸಾಕಷ್ಟು ನೊಂದಿದ್ದೇನೆ. ನನ್ನಂತೆ ನೊಂದ ಮಹಿಳೆಯರ ಪರ ಕೆಲಸ ಮಾಡುತ್ತೇನೆ. ಜನರಿಂದಲೇ ಸಹಾಯ ಕೇಳಿ ಕಾಲಿಗೆ ಬಿದ್ದು ಮತ ಕೇಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದು, ಇಲ್ಲಿ ನಮ್ಮ ಕುರುಬ ಸಮುದಾಯದವರು ಹೆಚ್ಚಾಗಿದ್ದಾರೆ. ಅವರು ನನ್ನ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
ಇನ್ನು ಮೇಟಿ ಅವರನ್ನು ಕಟ್ಟಿಹಾಕಲು ಬೇರೆ ಪಕ್ಷದವರು ಇವರ ಬೆನ್ನಿಗೆ ನಿಂತಿದ್ದಾರೆ ಎನ್ನಲಾಗುತ್ತಿದೆ. ಎಂಇಪಿ ಪಕ್ಷದಿಂದಲೂ ವಿಜಯಲಕ್ಷ್ಮಿ ಅವರಿಗೆ ಆಫರ್ ಬಂದಿದೆಯಂತೆ. ಆದರೆ, ನಾನು ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ