ಕೋಲಾರ ಜಿಲ್ಲೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹಲವು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಇಂದು ಸೇರ್ಪಡೆ

ಬೆಂಗಳೂರು,ಏ.5-ಕೋಲಾರ ಜಿಲ್ಲೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹಲವು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಇಂದು ಸೇರ್ಪಡೆಯಾದರು.
ನಗರದ ಜೆಪಿಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ವೆಂಕಟಶಿವಾರೆಡ್ಡಿ ನೇತೃತ್ವದಲ್ಲಿ ಹಲವು ಮುಖಂಡರು ಜೆಡಿಎಸ್ ಸೇರಿದರು.

ಈ ವೇಳೆ ಪಕ್ಷಕ್ಕೆ ಅವರನ್ನು ಬರಮಾಡಿಕೊಂಡು ಮಾತನಾಡಿದ ದೇವೆಗೌಡರು, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಅತ್ಯಂತ ಸೂಕ್ಷ್ಮ ವಿಧಾನಸಭಾ ಕ್ಷೇತ್ರವಾಗಿದ್ದು, ಕಳೆದ ಬಾರಿ ಅವರು ಸೋತಿದ್ದಾರೆ. ಆದರೆ ಈ ಬಾರಿ ಅವರಿಗೆ ಉತ್ತಮ ಭವಿಷ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸತತವಾಗಿ ಈ ಹೋರಾಟ ಮಾಡುತ್ತಾ ಬಂದಿದ್ದಾರೆ. ಜನರ ಕಷ್ಟ ನೋಡಿ ಹಲವು ಮುಖಂಡರು ಇಂದು ಕಾಂಗ್ರೆಸ್ ಬಿಟ್ಟು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಕಾರಣಕ್ಕಾಗಿ ಬಂದಿದ್ದಾರೆ ಎಂದು ನುಡಿದರು.

ಅವರಿಗೆ ಜವಾಬ್ದಾರಿ ಹೊರುವ ಎಲ್ಲ ಶಕ್ತಿಯೂ ಇದೆ. ಈ ಬಾರಿ ಚುನಾವಣೆಯಲ್ಲಿ ಅದನ್ನು ನಿರ್ವಹಿಸಲಿದ್ದಾರೆ ಎಂದರು.
ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತ ಪ್ರಸನ್ನ ಕುಮಾರ್, ಪುರಸಭಾ ಮಾಜಿ ಅಧ್ಯಕ್ಷರಾದ ಅರುಣಾ ಜಗದೀಶ್, ಪುರಸಭಾ ಮಾಜಿ ಸದಸ್ಯರಾದ ಮಂಜುನಾಥ್ ಗೌಡ, ಶಿವಣ್ಣ , ಮುನಿರಾಜು ಮತ್ತಿತರರು ಸೇರ್ಪಡೆಯಾದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ