ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆಗ್ರಹಿಸಿ ತಮಿಳುನಾಡು ಬಂದ್:

ಚೆನ್ನೈ, ಏ.5-ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆಗ್ರಹಿಸಿ ಡಿಎಂಕೆ ನೇತೃತ್ವದ ವಿರೋಧ ಪಕ್ಷಗಳು ಇಂದು ತಮಿಳುನಾಡು ಬಂದ್ ಆಚರಿಸಿದವು.
ರಾಜಧಾನಿ ಚೆನ್ನೈ, ಹಾಗೂ ಕಾವೇರಿ ನದಿ ಪಾತ್ರದ ತಿರುಚಿರಾಪಳ್ಳಿ ಮತ್ತು ತಂಜಾವೂರ್ ಸೇರಿದಂತೆ ರಾಜ್ಯಾದ್ಯಂತ ಬಂದ್ ಆಚರಿಸಲಾಗಿದೆ. ತಮಿಳುನಾಡು ಬಂದ್ ಪ್ರಯುಕ್ತ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಮಾರುಕಟ್ಟೆಗಳು ಮುಚ್ಚಿದ್ದವು. ಬ್ಯಾಂಕುಗಳು, ಔಷಧ ಅಂಗಡಿಗಳು, ಆಸ್ಪತ್ರೆಗಳು ಹಾಗೂ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದವು. ವಾಹನ ಸಂಚಾರ ವಿರಳವಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ