ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು :

ಬೆಂಗಳೂರು,ಏ.5-ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ದೊಡ್ಡ ನಕ್ಕುಂದಿಯ 3ನೇ ಕ್ರಾಸ್‍ನ ಗುರುರಾಜ ಲೇಔಟ್ ನಿವಾಸಿ ವಿಷ್ಣು ಅವರು ನಿನ್ನೆ ಬೆಳಗ್ಗೆ ಹೊರಗೆ ಹೋಗಿದ್ದರು.  ಈ ವೇಳೆ ಕಳ್ಳರು ಇವರ ಮನೆಯ ಬೀಗ ಮುರಿದು ಒಳನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಸಂಜೆ ವಿಷ್ಣು ಮನೆಗೆ ವಾಪಸ್ ಆದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳವಾಗಿರುವ ವಸ್ತುಗಳ ಮೌಲ್ಯ ಸದ್ಯಕ್ಕೆ ತಿಳಿದುಬಂದಿಲ್ಲ.  ಎಚ್‍ಎಎಲ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ