ಜೆಡಿಎಸ್, ಬಿಜೆಪಿಯ ಬಿ ಟೀಮ್ ಎಂದು ಲೇವಡಿ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಗೆ ಇನ್ನೂ ರಾಜಕೀಯ ಪ್ರೌಢಿಮೆ ಬಂದಿಲ್ಲ – ಜೆಡಿಎಸ್ ಜಿಲ್ಲಾಧ್ಯಕ್ಷ ಚೆನ್ನಿಗಪ್ಪ

ತುಮಕೂರು, ಏ.6- ಜೆಡಿಎಸ್, ಬಿಜೆಪಿಯ ಬಿ ಟೀಮ್ ಎಂದು ಲೇವಡಿ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಗೆ ಇನ್ನೂ ರಾಜಕೀಯ ಪ್ರೌಢಿಮೆ ಬಂದಿಲ್ಲ. ಕೇವಲ ಯಾರೋ ಬರೆದುಕೊಡುವ ಭಾಷಣವನ್ನು ಓದಿಕೊಂಡು ಹೋಗುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಚೆನ್ನಿಗಪ್ಪ ವಾಗ್ದಾಳಿ ನಡೆಸಿದ್ದಾರೆ.
ಬೆಳ್ಳಾವಿಯಲ್ಲಿ ನಡೆದ ಜೆಡಿಎಸ್ ಸಮಾವೇಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‍ನ್ನು ಬಿಜೆಪಿಯ ಬಿ ಟೀಮ್ ಎಂದು ಹೇಳಲು ರಾಹುಲ್‍ಗಾಂಧಿ ಹೇಳಲು ಯಾರು ? ಸುಪ್ರೀಂಕೋರ್ಟ್ ಅಥವಾ ರಾಷ್ಟ್ರದ ಒಡೆಯನಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜನರ ಭಾವನೆಯನ್ನು ಅರ್ಧಮಾಡಿಕೊಳ್ಳದ ರಾಹುಲ್‍ಗಾಂಧಿಗೆ ಕರ್ನಾಟಕದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಇವರ ಪ್ರವಾಸದಿಂದ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ. ಅಲ್ಲದೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ರಾಹುಲ್‍ಗೆ ಶ್ರೀಗಳಿಗೆ ಹೇಗೆ ನಮಸ್ಕರಿಸಬೇಕು ಎಂಬುದೂ ಗೊತ್ತಿಲ್ಲ. ಅಂತಹವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ. ಮೊದಲು ಅವರು ನಮ್ಮ ಸಂಸ್ಕøತಿ, ಆಚಾರ, ವಿಚಾರ ತಿಳಿದುಕೊಳ್ಳಲಿ. ಕೇವಲ ರಾಜಕೀಯ ಲಾಭಕ್ಕಾಗಿ ದೇವಸ್ಥಾನ, ಮಠಗಳಿಗೆ ಭೇಟಿ ಕೊಡುತ್ತಿದ್ದಾರೆ. ಇದು ಜನರ ಕಣ್ಣೊರೆಸುವ ತಂತ್ರ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ