ನಾಳೆ ಮಧ್ಯಾಹ್ನ 1 ಗಂಟೆಗೆ ಹುಳಿಮಾವು ಗ್ರಾಮದಲ್ಲಿ ಕೋದಂಡರಾಮ ಸ್ವಾಮಿ ದೇವರ ಬ್ರಹ್ಮರಥೋತ್ಸವ

ಬೆಂಗಳೂರು ,ಏ.6- ಬೆಂಗಳೂರು ದಕ್ಷಿಣ ತಾಲ್ಲೂಕು ಹುಳಿಮಾವು ಗ್ರಾಮದಲ್ಲಿ ಅನಾದಿಕಾಲದಿಂದಲೂ ನೆಲೆಸಿರುವ ಕೋದಂಡರಾಮ ಸ್ವಾಮಿ ದೇವರ ಬ್ರಹ್ಮರಥೋತ್ಸವ ನಾಳೆ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಜೀರ್ಣೋದ್ಧಾರದ ಟ್ರಸ್ಟ್‍ನ ಧರ್ಮದರ್ಶಿ ಮಂಡಳಿಯ ಸದಸ್ಯ ಸಿ.ಲಕ್ಷ್ಮಿನಾರಾಯಣ್ ಹೆಲಿಕ್ಯಾಪ್ಟರ್ ಮೂಲಕ ಪುಷ್ಪವೃಷ್ಟಿ ಮೂಲಕ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಬ್ರಹ್ಮರಥೋತ್ಸವದ ಅಂಗವಾಗಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು , ರಾತ್ರಿ 9 ಗಂಟೆಗೆ ವಿವಿಧ ದೇವರುಗಳ 58 ಮುತ್ತಿನ ಮತ್ತು ಹೂವಿನ ಪಲ್ಲಕ್ಕಿ ಉತ್ಸವ ನಡೆಯಲಿದೆ. ರಾತ್ರಿ 1 ಗಂಟೆಗೆ ಶ್ರೀ ರೇಣುಕಾ ಯಲಮ್ಮದೇವಿಯ ಕರಗ ಮಹೋತ್ಸವ ನಡೆಯಲಿದೆ ಎಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ