ಬಸ್ಸೊಂದು ನೌಕರರನ್ನು ಇಳಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರನ ಸಾವು

ಬೆಂಗಳೂರು, ಏ.6-ಫ್ಯಾಕ್ಟರಿಗೆ ಸೇರಿದ ಬಸ್ಸೊಂದು ನೌಕರರನ್ನು ಇಳಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರ ಸಂಚಾರ ಪೆÇಲೀಸ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ಮದನಪಲ್ಲಿಯ ಮಂಜುನಾಥ (24)ಮೃತಪಟ್ಟ ಬೈಕ್ ಸವಾರ.

ನಗರದ ದೇವಸಂದ್ರದಲ್ಲಿ ವಾಸವಾಗಿದ್ದ ಮಂಜುನಾಥ್ ಖಾಸಗಿ ಕಂಪೆನಿಯೊಂದರಲ್ಲಿ ನೌಕರರಾಗಿದ್ದರು.

ಹೊಸಕೋಟೆ-ಕೆ.ಆರ್.ಪುರ ರಸ್ತೆಯ ಮೇಡರಹಳ್ಳಿ ಬ್ರಿಡ್ಜ್ ಮೇಲೆ ಸಂಜೆ 6.45ರಲ್ಲಿ ಫ್ಯಾಕ್ಟರಿಯೊಂದರ ಬಸ್ ನೌಕರರನ್ನು ಇಳಿಸುತ್ತಿತ್ತು.
ಈ ಸಂದರ್ಭದಲ್ಲಿ ಇದೇ ಮಾರ್ಗದಲ್ಲಿ ಬೈಕ್‍ನಲ್ಲಿ ಮಂಜುನಾಥ್ ನಿಯಂತ್ರಣ ತಪ್ಪಿ ಹಿಂದಿನಿಂದ ಬಸ್‍ಗೆ ಡಿಕ್ಕಿ ಹೊಡೆದಿದ್ದಾನೆ.

ಪರಿಣಾಮವಾಗಿ ಗಂಭೀರ ಗಾಯಗೊಂಡಿದ್ದ ಮಂಜುನಾಥನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ರಾತ್ರಿ 8.30ರಲ್ಲಿ ಮೃತಪಟ್ಟಿದ್ದಾನೆ.

ಶವವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
ಕೆ.ಆರ್.ಪುರ ಸಂಚಾರಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ