ನಾಳೆ ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಮತದಾರರ ಮಿಂಚಿನ ನೋಂದಣಿ ಅಭಿಯಾನ

ಬೆಂಗಳೂರು,ಏ.7- ಮತದಾರರ ಪಟ್ಟಿಗೆ ತಮ್ಮ ಹೆಸರು ನೋಂದಾಯಿಸಲು ಏ.14ರವರೆಗೂ ಅವಕಾಶವಿದ್ದು , ಭಾರತ ಚುನಾವಣಾ ಆಯೋಗ ನಾಳೆ ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಮತದಾರರ ಮಿಂಚಿನ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದೆ.
ನಾಳೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲ ಮತಗಟ್ಟೆಗಳಲ್ಲಿ ಈ ಅಭಿಯಾನ ಕಾರ್ಯ ಹಮ್ಮಿಕೊಂಡಿದ್ದು , ಯಾವ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದೆಂಬ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಂಡಿರುವುದಾಗಿ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

2018ರ ಜನವರಿ 1ಕ್ಕೆ 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅರ್ಹರಾಗಿರುತ್ತಾರೆ. ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳಾದ ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್‍ಪೆÇೀರ್ಟ್ ಜೊತೆಗೆ ವಾಸಸ್ಥಳ ದಾಖಲಾತಿಗಳಾದ ಪಡಿತರ ಚೀಟಿ, ವಿದ್ಯುತ್ ಬಿಲ್, ಮನೆ ಬಾಡಿಗೆ ಕರಾರು ಪತ್ರ, ಬ್ಯಾಂಕ್ ಪಾಸ್ ಬುಕ್, ಚಾಲನಾ ಪರವಾನಗಿ ಪತ್ರ ಮತ್ತಿತರೆ ದಾಖಲೆ ಒದಗಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಬುದಾಗಿದೆ.
ನೋಂದಣಿ ಸಮಯದಲ್ಲಿ ಎರಡು ಪಾಸ್‍ಪೆÇೀಟ್ ್ ಅಳತೆಯ ಭಾವಚಿತ್ರವನ್ನು ನೀಡಬೇಕು.

ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವವರು ನಮೂನೆ-6, ಅನಿವಾಸಿ ಭಾರತೀಯ ಮತದಾರರು ನಮೂನೆ-6ಎ , ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ನಮೂನೆ-7, ಮತದಾರರ ಪಟ್ಟಿಯಲ್ಲಿ ದೋಷ ಸರಿಪಡಿಸಕೊಳ್ಳಲು ನಮೂನೆ-8ರಲ್ಲಿ ಅರ್ಜಿ ಸಲ್ಲಿಸಬೇಕು.

ಒಂದೇ ವಿಧಾನಸಭಾ ಕ್ಷೇತ್ರದಲ್ಲಿ ವಾಸಸ್ಥಳ ಬದಲಾವಣೆ ಅಗತ್ಯವಿದ್ದರೆ ನಮೂನೆ-8ಎನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ