ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಿನಿ ಲಾರಿಯೊಂದು ಡಿಕ್ಕಿ

ಬೆಂಗಳೂರು, ಏ.8-ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಿನಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಕೌಂಟೆಂಟ್‍ವೊಬ್ಬರು ಮೃತಪಟ್ಟಿರುವ ಘಟನೆ ಕೆ.ಎಸ್.ಲೇಔಟ್ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಿ.ಪಿ.ಲೇಔಟ್ ನಿವಾಸಿ ಶ್ರೀನಿಧಿ (34) ಮೃತಪಟ್ಟ ಬೈಕ್ ಸವಾರ.

ಖಾಸಗಿ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಆಗಿದ್ದ ಶ್ರೀನಿಧಿ ಅವರು ಸಂಜೆ 5.45ರಲ್ಲಿ ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ಹೋಗುತ್ತಿದ್ದಾಗ ನೈಸ್ ರಸ್ತೆಯ ಬ್ರಿಡ್ಜ್ ಬಳಿ ಅತಿ ವೇಗವಾಗಿ ಬಂದ ಮಿನಿ ಲಾರಿ ಇವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗಂಭೀರಗಾಯಗೊಂಡ ಶ್ರೀನಿಧಿ ಮೃತಪಟ್ಟಿದ್ದಾರೆ.

ಶವವನ್ನು ಕೆಂಪೇಗೌಡ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿರುವ ಕೆ.ಎಸ್.ಲೇಔಟ್ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ