ಮಹಾರಾಷ್ಟ್ರದಲ್ಲಿ ಶಿವಸೇನೆಯ ಇಬ್ಬರು ನಾಯಕರ ಗುಂಡಿಟ್ಟು ಹತ್ಯೆ 

ಅಹ್ಮದ್ ನಗರ,ಏ.7

ದ್ವಿಚಕ್ರ ವಾಹನದಲ್ಲಿ ಬಂದಿರುವ ದುಷ್ಕರ್ಮಿಗಳು ಶಿವಸೇನೆಯ ಇಬ್ಬರು ಸ್ಥಳೀಯ ನಾಯಕರನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿ ಶನಿವಾರ ನಡೆದಿದೆ.

ಅಹ್ಮದ್ ನಗರದ ಶಾಹುನಗರ ಪ್ರದೇಶದಲ್ಲಿ ಶನಿವಾರ ಸಂಜೆ 5.15ರ ಸುಮಾರಿಗೆ ಘಟನೆ ನಡೆದಿದೆ.

ಸಂಜಯ್ ಕೊತ್ಕರ್ (35) ಮತ್ತು ವಸಂತ್ ಆನಂದ್ ಥುಬೆ (40) ಹತ್ಯೆಗೀಡಾದ ಶಿವಸೇನೆ ನಾಯಕರಾಗಿದ್ದಾರೆ.

ನಿನ್ನೆ ಸಂಜೆ ಬೈಕ್ ನಲ್ಲಿ ಬಂದಿರುವ ದುಷ್ಕರ್ಮಿಗಳು ಸಂಜಯ್ ಹಾಗೂ ವಸಂತ್ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಸಂಜಯ್ ಹಾಗೂ ವಸಂತ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಸ್ಥಳದಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ದುಷ್ಕರ್ಮಿಗಳ ಪತ್ತೆ ಹಚ್ಚಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ