ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್-ಬಾಹರ್ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ

ಬೆಂಗಳೂರು, ಏ.8- ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್-ಬಾಹರ್ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ ಸಿಸಿಬಿ ಪೆÇಲೀಸರು ಆರು ಮಂದಿಯನ್ನು ಬಂಧಿಸಿ 1.78 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಸುನೀಲ(28), ಅಕ್ಷಯ್ (23), ಮಂಜುನಾಥರೆಡ್ಡಿ(35), ರಾಜು(39), ಸುಬ್ರಹ್ಮಣಿ(28) ಮತ್ತು ವಿಜಯ್(22) ಬಂಧಿತ ಜೂಜುಕೋರರು.
ಎಚ್‍ಎಎಲ್ ವ್ಯಾಪ್ತಿಯ ದೊಡ್ಡನೆಕ್ಕುಂದಿ, ಶ್ಯಾನುಭೋಗ ಲೇಔಟ್ 5ನೇ ಕ್ರಾಸ್ ಮನೆಯೊಂದರ ಹಿಂಭಾಗದ ಪ್ಯಾಸೇಜ್‍ನ ತೆರೆದ ಸ್ಥಳದಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಜೂಜಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೆÇಲೀಸರು ಸ್ಥಳದಲ್ಲಿದ್ದ ಆರು ಮಂದಿಯನ್ನು ಬಂಧಿಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಎಚ್‍ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ