ಇಂದಿನಿಂದ ಎಸ್.ಆರ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆ ವತಿಯಿಂದ ಉಚಿತ ಧ್ವನಿ ಶಿಬಿರ

ಬೆಂಗಳೂರು,ಏ.9-ಎಸ್.ಆರ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆ ವತಿಯಿಂದ ಉಚಿತ ಧ್ವನಿ ಶಿಬಿರವನ್ನು ಇಂದಿನಿಂದ 13ರವರೆಗೆ ಹೆಣ್ಣೂರು ಮುಖ್ಯರಸ್ತೆಯ ಕರಿಯಣ್ಣನಪಾಳ್ಯದಲ್ಲಿರುವ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲರಾದ ಮಧುರೇ ಗೌರೇ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಬಿರವನ್ನು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ನಡೆಯಲಿದ್ದು, ಧ್ವನಿ ಏರುಪೇರು ಮತ್ತು ಕಿರುನಾಲಿಗೆ ತೊಂದರೆ, ಶ್ರವಣ ದೋಷ ಇರುವವರಿಗೆ ಉಚಿತವಾಗಿ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.
ಅತಿಯಾದ ತೊಂದರೆ ಇದ್ದರೆ ಶಿಬಿರ ಮುಗಿದ ನಂತರ ಚಿಕಿತ್ಸೆ ನೀಡಲಾಗುವುದು. ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ 25460405 / 25470037 ಸಂಪರ್ಕಿಸಲು ಕೋರಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ