ವಿಧಾನಪರಿಷತ್ ಸದಸ್ಯ ಭೆರತಿ ಸುರೇಶ್ ರಾಜೀನಾಮೆ ಅಂಗೀಕಾರ

 

ಬೆಂಗಳೂರು,ಏ.9-ವಿಧಾನಪರಿಷತ್ ಸದಸ್ಯ ಭೆರತಿ ಸುರೇಶ್ ನೀಡಿರುವ ರಾಜೀನಾಮೆ ಅಂಗೀಕರಿಸಿರುವುದಾಗಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ತಮ್ಮ ಮನೆಗೆ ಬಂದು ಭೆರತಿ ಸುರೇಶ್ ಅವರು ರಾಜೀನಾಮೆ ಸಲ್ಲಿಸಿ ಕೂಡಲೇ ಅಂಗೀಕರಿಸುವಂತೆ ಮನವಿ ಮಾಡಿದ್ದರು. ಪತ್ರ ಸರಿಯಿದ್ದ ಹಿನ್ನೆಲೆಯಲ್ಲಿ ಅದನ್ನು ಅಂಗೀಕರಿಸಲಾಗಿದೆ ಎಂದರು.

ಪಕ್ಷೇತರ ಸದಸ್ಯರಲ್ಲಿ ಪರಿಷತ್‍ಗೆ ಆಯ್ಕೆಯಾಗಿದ್ದ ಅವರು, ಮೂರು ತಿಂಗಳಲ್ಲಿ ನಿವೃತ್ತಿಯಾಗುತ್ತಿದ್ದರು. ಬೇರೊಂದು ಪಕ್ಷದ ಮೂಲಕ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರಬಹುದು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ