ಟಿಕೆಟ್ ಆಕಾಂಕ್ಷಿಯೊಬ್ಬರ ನೀತಿ ಸಂಹಿತೆ ಉಲ್ಲಂಘನೆ:

ಮೈಸೂರು,ಏ.9- ಟಿಕೆಟ್ ಆಕಾಂಕ್ಷಿಯೊಬ್ಬರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.
ನಂಜನಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿಮಂತ್ರಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಹರ್ಷವರ್ಧನ್ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪ ಎದುರಿಸುತಿದ್ದಾರೆ. ಹರ್ಷವರ್ಧನ ಅವರು ನಂಜನಗೂಡು ಪಟ್ಟಣದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಕ್ರಿಕೆಕಟ್ ಪಂದ್ಯಾವಳಿ ವೇಳೆ ಹಣವನ್ನು ಬಹುಮಾನವನ್ನಾಗಿ ನೀಡಿ, ಹರ್ಷ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.
ಸಾರ್ವತ್ರಿಕ ಚುನಾವಣೆಯಲ್ಲಿ ಯುವಕರನ್ನು ಸೆಳೆಯುವ ಹಿನ್ನೆಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ