ಹೊಳೆನರಸೀಪುರ ಕ್ಷೇತ್ರಕ್ಕೆ ಯಾರೇ ಬಂದರೂ ರೇವಣ್ಣ ಅವರನ್ನು ಸೋಲಿಸಲು ಸಾಧ್ಯವಿಲ್ಲ – ಭವಾನಿ ರೇವಣ್ಣ

ಹಾಸನ, ಏ.11- ಹೊಳೆನರಸೀಪುರ ಕ್ಷೇತ್ರಕ್ಕೆ ಯಾರೇ ಬಂದರೂ ರೇವಣ್ಣ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಭವಾನಿ ರೇವಣ್ಣ ತಿಳಿಸಿದ್ದಾರೆ.

ನಂಜೇಗೌಡ ಅವರು ಹೊರಗಿನವರು. ಈಗಷ್ಟೆ ಬಾಡೂಟದ ಮೂಲಕ ಜನರನ್ನು ಪರಿಚಯ ಮಾಡಿಕೊಳ್ಳುತ್ತಿದ್ದಾರೆ ಅಷ್ಟೆ. ಅವರು ಕಾಂಗ್ರೆಸ್ ಅಭ್ಯರ್ಥಿಯಾದರೆ ನಮಗೇ ಲಾಭ. ನಮ್ಮ ಕಾರ್ಯಕರ್ತರೇ ಅವರ ವಿರುದ್ಧ ಇದ್ದಾರೆ. ಸಿದ್ದರಾಮಯ್ಯನವರ ಮೇಲೆ ರೇವಣ್ಣ ವಿಶ್ವಾಸ ಇಟ್ಟಿದ್ದರು. ಆದರೆ, ಈಗ ಅವರ ನಿಜಬಣ್ಣ ಬಯಲಾಗಿದೆ.

ಪುತ್ರ ಪ್ರಜ್ವಲ್ ರೇವಣ್ಣ ವಿಧಾನಸಭೆಗೆ ಪ್ರವೇಶ ಮಾಡಬೇಕೆಂಬ ಆಸೆಯಿತ್ತು. ದೇವೇಗೌಡ ಅವರ ಸೂಚನೆ ಮೇರೆಗೆ ಸ್ಪರ್ಧೆಯಿಂದ ಹಿಂದೆ ಸರಿಯಲಾಗಿದೆ ಎಂದು ಸ್ಪಷ್ಟಪಡಿಸಿದರು.

ಏ.13ರಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯ ಏಳು ಸ್ಥಾನಗಳಲ್ಲೂ ಜೆಡಿಎಸ್ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ