ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆ

 

ಬೆಂಗಳೂರು,ಏ.11-ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆಯನ್ನು ಸಾಮಾಜಿಕ ನ್ಯಾಯ ದಿನವನ್ನಾಗಿ ಏ.14ರಂದು ಸಂಜೆ 4 ಗಂಟೆಗೆ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ಒಕ್ಕೂಟದ ರಾಜ್ಯ ಸಂಚಾಲಕ ಗೋಪಾಲ ಕೃಷ್ಣ ಅರಳಹಳ್ಳಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಬಹುಭಾಷಾ ನಟ ಪ್ರಕಾಶ್ ರೈ, ಸಾಹಿತಿ ಮರುಳ ಸಿದ್ದಪ್ಪ ಭಾಗವಹಿಸಲಿದ್ದಾರೆಂದು ತಿಳಿಸಿದರು.

ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು , ಇದನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ದಲಿತರ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಿರುವ ಮತ್ತು ಬಡ್ತಿ ಮೀಸಲಾತಿ ರದ್ದತಿಯನ್ನು ಸುಪ್ರೀಂಕೋರ್ಟ್ ತೀರ್ಪನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು.
ಬಡ್ತಿ ಮೀಸಲಾತಿಯನ್ನು ರದ್ದುಪಡಿಸಿದ್ದರಿಂದ 15 ಸಾವಿರಕ್ಕೂ ಹೆಚ್ಚು ಮುಂಬಡ್ತಿ ಪಡೆದಿರುವ ನೌಕರರಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ