ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆ: ರೇವಣ್ಣ

ಬೆಂಗಳೂರು, ಏ.11-ನಾನು ಟಿಕೇಟ್ ಆಕಾಂಕ್ಷಿಯಲ್ಲ. ಸ್ಕ್ರೀನಿಂಗ್ ಕಮಿಟಿ ಮುಂದೆ ನನ್ನ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಹೈಕಮಾಂಡ್ ಸೂಚಿಸಿದರೆ ಅದನ್ನು ಪಾಲಿಸಲು ಸಿದ್ಧ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಇಂದಿಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚನ್ನಪಟ್ಟಣ ಕ್ಷೇತ್ರದಿಂದ ಟಿಕೆಟ್ ಕೇಳಿಲ್ಲ,ಟಿಕೆಟ್ ಕೊಟ್ಟು ಸ್ಪರ್ಧಿಸುವಂತೆ ಸೂಚಿಸಿದರೆ ಪಕ್ಷದ ಸಿಪಾಯಿಯಾದ ನಾನು ಅದನ್ನು ನಿರ್ವಹಿಸುತ್ತೇನೆ. ಸದ್ಯಕ್ಕಂತೂ ಅಂತಹ ಯಾವುದೇ ಸೂಚನೆಯನ್ನು ಹೈಕಮಾಂಡ್ ನಮಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಧಾನಪರಿಷತ್‍ನಲ್ಲಿ ನಮ್ಮ ಸ್ಥಾನಕ್ಕೆ ಇನ್ನೂ ಒಂದೂವರೆ ವರ್ಷಗಳ ಕಾಲಾವಕಾಶ ಇದೆ. ಅಲ್ಲಿಯವರೆಗೂ ಕೆಲಸ ಮಾಡುತ್ತೇನೆ. ಹೈಕಮಾಂಡ್‍ನ ನಿರ್ಧಾರ ಏನೆಂಬುದು ನಮಗೆ ತಿಳಿದಿಲ್ಲ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ