ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ನಗರದಲ್ಲಿ ಪಥಸಂಚಲನ

ರಾಯಚೂರು:ಏ-11: ಚುನಾವಣೆಯನ್ನು ಪಾರದರ್ಶಕವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗರುಕತೆ ವಹಿಸುವ ಭಾಗವಾಗಿ ಸಿಆರ್ ಪಿಎಫ್ ತಂಡದೊಂದಿಗೆ ಜಿಲ್ಲಾಡಳಿತದಿಂದ ಪಥಸಂಚಲನ ನಡೆಸಿತು.

ನಗರದ ಪ್ರಮುಖ ರಸ್ತೆಯಲ್ಲಿ ಪಥಸಂಚಲನ ನಡೆಸಿ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಲು ಪ್ರತಿಯೊಬ್ಬರು ಜಾಗೃತರಾಗಬೇಕು.ಜಿಲ್ಲೆಯಲ್ಲಿ ಚುನಾವಣೆಯನ್ನು ಸಕ್ರಮವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ಜಿಲ್ಲಾಧಿಕಾರಿ ಗೌತಮ್ ಬಗಾದಿ, ಎಸ್ಪಿ ಕಿಶೋರ್ ಬಾಬು ನೇತೃತ್ವದಲ್ಲಿ ಚುನಾವಣಾ ಅಧಿಕಾರಿಗಳು, ಪೋಲಿಸರು ಹಾಗೂ ಸಿಆರ್​ಪಿಎಫ್ ಯೋಧರು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.

Transparent Election, Passage,Mandatory voting, district administration preparation

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ