ಈ ವಾರ ತೆರೆಗೆ `ದಳಪತಿ’

ನಿಮ್ಮ ಸಿನಿಮಾ ಲಾಂಛನದಲ್ಲಿ ನವೀನ್ ಅವರು ನಿರ್ಮಿಸಿರುವ `ದಳಪತಿ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
`ಲವ್ ಗುರು` ಪ್ರಶಾಂತ್ ರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಚರಣ್‍ರಾಜ್ ಸಂಗೀತ ನೀಡಿದ್ದಾರೆ. ಎಂ.ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ವಿ.ರವಿಚಂದ್ರ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಮಾಸ್‍ಮಾದ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಲವ್ಲೀ ಸ್ಟಾರ್ ಪ್ರೇಮ್(ನೆನಪಿರಲಿ), ಕೃತಿ ಖರಬಂದ, ಚಿಕ್ಕಣ್ಣ, ಕೃಷಿ ತಾಪಂಡ, ಶರತ್ ಲೋಹಿತಾಶ್ವ, ಶ್ರೀನಿವಾಸ ಪ್ರಭು, ಪದ್ಮಜಾರಾಜ್ ಮುಂತಾದವರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ