ಗದಗದಲ್ಲಿ ಅಮಿತ್ ಶಾ ಚುನಾವಣಾ ಪ್ರಚಾರ

ಗದಗ:ಏ-12: ಎರಡು ದಿನಗಳ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರೋ ಅಮಿತ್‌‌ ಶಾ ಇಂದು ಗದಗ್ ಗೆ ಭೇಟಿ ನೀಡಿ ಇಲ್ಲಿನ ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು.

ಹೆಲಿಕಾಪ್ಟರ್ ಮೂಲಕ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮಕ್ಕೆ ಆಗಮಿಸಿದ ಅಮಿತ್‌ ಶಾ ಮುಷ್ಠಿ ಧಾನ್ಯ ಸಂಗ್ರಹ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೆಸೆದು ಯಡಿಯೂರಪ್ಪ ಸರ್ಕಾರ ತನ್ನಿ. ಸಿದ್ದರಾಮಯ್ಯ ಸರ್ಕಾರ ಮನೆಗೆ ಹೋಗುವ ಸಮಯ ಬಂದಿದೆ. ತಾಯಂದಿರು ಮುಷ್ಠಿ ಮೂಲಕ ನೀಡಿದ ಅಕ್ಕಿ ನಮ್ಮ ರಕ್ತದಲ್ಲಿದೆ. ನಿಮ್ಮ ಋಣವನ್ನು ತೀರಿಸಲು ನಾವು ಕರ್ನಾಟಕವನ್ನು ಕಲ್ಯಾಣ ರಾಜ್ಯವನ್ನಾಗಿ ಮಾಡುತ್ತೇವೆ ಎಂದರು.

ಅಮಿತ್‌‌ ಶಾ ಹೆಲಿಕಾಪ್ಟರ್ ಮೂಲಕ ಆಗಮಿಸುತ್ತಿದ್ದಂತೆಯೇ ಅವರನ್ನು ನೋಡಲು ನಿಂತಿದ್ದ ರೈತರು ಹಾಗೂ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆ ನಡೆದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ