ಅಮಿತ್ ಶಾ ಅವರಿಂದ ಮುರುಘಾಮಠ ಹಾಗೂ ವರಕವಿ ಬೇಂದ್ರೆ ನಿವಾಸಕ್ಕೆ ಭೇಟಿ

ಧಾರವಾಡ:ಏ-12: ಇದೇ ಮೊದಲ ಬಾರಿಗೆ ಧಾರವಾಡಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಗರದ ಪ್ರಸಿದ್ಧ ಮುರುಘಾಮಠಕ್ಕೆ ಭೇಟಿ ನೀಡಿ ಮೃತ್ಯುಂಜಪ್ಪ ಅವರ ಆಶೀರ್ವಾದ ಪಡೆದರು.

ಇದಕ್ಕೂ ಮೊದಲು ನಗರದ ಸಾಧನಾಕೇರಿಯಲ್ಲಿರು ವರಕವಿ ದ.ರಾ. ಬೇಂದ್ರೆ ಅವರ ನಿವಾಸಕ್ಕೆ ಭೇಟಿ ನೀಡಿದ ಅಮಿತ್‌‌ ಶಾ, ಬಳಿಕ ಅಲ್ಲಿಂದ ನೇರವಾಗಿ ಮುರುಘಾಮಠಕ್ಕೆ ಭೇಟಿ ನೀಡಿದರು. ಅಲ್ಲಿ ಮೃತ್ಯುಂಜಯಪ್ಪ ಅವರ ಕರ್ತೃ ಗದ್ದುಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ನಂತರ ಅಲ್ಲಿಂದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿಗಳನ್ನು ಭೇಟಿ ಮಾಡಿದರು. ಅಮಿತ್ ಶಾ ಅವರೊಂದಿಗೆ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಅನೇಕರು ಮುರುಘಾಮಠಕ್ಕೆ ಭೇಟಿ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ