ಕೆಮಿಕಲ್ ತುಂಬಿದ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಬೆಂಕಿ: ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿಯೇ ಸಜೀವ ದಹನ

ಆನೇಕಲ್, ಏ.13- ಅತ್ತಿಬೆಲೆ ಸಮೀಪದ ಚೆಕ್ ಪೆÇೀಸ್ಟ್ ಬಳಿ ನಿಲ್ಲಿಸಿದ್ದ ಕಂಟೈನರ್‍ಗೆ ಕೆಮಿಕಲ್ ತುಂಬಿದ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡು ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿಯೇ ಸಜೀವ ದಹನವಾಗಿರುವ ಘಟನೆ ತಡರಾತ್ರಿ ನಡೆದಿದೆ.
ಮಹಾರಾಷ್ಟ್ರದ ತಂಜಾವೂರಿನ ವೇಲು ಮುರುಗನ್(24) ಹಾಗೂ ಕ್ಲೀನರ್ ಮೃತಪಟ್ಟಿದ್ದು, ಈತನ ಹೆಸರು ತಿಳಿದುಬಂದಿಲ್ಲ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆ ಚೆಕ್‍ಪೆÇೀಸ್ಟ್ ಬಳಿಯ ರಸ್ತೆ ಬದಿ ತಡರಾತ್ರಿ ಕಂಟೈನರ್ ನಿಲ್ಲಿಸಲಾಗಿತ್ತು.
ಈ ವೇಳೆ ಈ ವಾಹನ ನಿಂತಿರುವುದು ಲಾರಿ ಚಾಲಕನ ಗಮನಕ್ಕೆ ಬಾರದೆ ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಕಂಟೈನರ್‍ಗೆ ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯಲ್ಲಿದ್ದ ಕೆಮಿಕಲ್‍ಗೆ ಬೆಂಕಿ ತಗುಲಿ ಲಾರಿಯನ್ನು ಆವರಿಸಿದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಇಬ್ಬರು ಸಜೀವ ದಹನವಾಗಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಅತ್ತಿಬೆಲೆ ಪೆÇೀಲಿಸರು ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ