ಶ್ರೀರಾಮುಲು ಕಾರಿಗೆ ಮುತ್ತಿಗೆ : 25ಕ್ಕೂ ಹೆಚ್ಚು ಮಂದಿ ನ್ಯಾಯಾಂಗ ಬಂಧನಕ್ಕೆ

ಚಿತ್ರದುರ್ಗ, ಏ.14-ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ ಯಲ್ಲಿ ಶ್ರೀರಾಮುಲು ಕಾರಿಗೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಬಂಧಿಸಲಾಗಿದ್ದ ಸುಮಾರು 25ಕ್ಕೂ ಹೆಚ್ಚು ಮಂದಿಯನ್ನು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ನಿನ್ನೆ ನಾಯಕನಹಟ್ಟಿಯಲ್ಲಿ ಶ್ರೀರಾಮುಲು, ಶ್ರೀ ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದಾಗ ಟಿಕೆಟ್ ವಂಚಿತ ತಿಪ್ಪೇಸ್ವಾಮಿ ಬೆಂಬಲಿಗರು ಶ್ರೀರಾಮುಲು ಕಾರಿಗೆ ಕಲ್ಲು ತೂರಾಟ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸುಮಾರು 25 ಮಂದಿಯನ್ನು ಬಂಧಿಸಲಾಗಿತ್ತು. ರಾತ್ರಿ 10 ಗಂಟೆಗೆ ಚಳ್ಳಕೆರೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನಂತರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರು ಮಹಿಳೆಯರಿಗೆ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಿ, ಉಳಿದವರಿಗೆ ಇದೇ 24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ