ಸಾರಿಗೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಗಾಯ

ಗೌರಿಬಿದನೂರು, ಏ.14- ನಗರದ ಬೆಂಗಳೂರು ರಸ್ತೆಯ ವಾಲ್ಮೀಕಿ ವೃತ್ತದ ಬಳಿ ಏ.7 ರಂದು ಸಾರಿಗೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ ಒಬ್ಬನಿಗೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಗಿನ ಜಾವ ಮೃತಪಟ್ಟಿದ್ದಾನೆ.
ನಗರದ ಉಪ್ಪಾರಕಾಲೋನಿ ವಾಸಿ ಚಂದ್ರು(54) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈತ ಖಾಸಗಿ ಬಸ್‍ನಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದರು ಎನ್ನಲಾಗಿದೆ.
ಮತ್ತೊಬ್ಬ ಗಾಯಾಳು ವೆಂಕಟೇಶ್ ಗಂಭೀೀರವಾಗಿ ಗಾಯಗೊಂಡು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದ ವಾಲ್ಮೀಕಿ ವೃತ್ತದಲ್ಲಿ ದ್ವಿಚಕ್ರ ವಾಹನದಲ್ಲಿ ತಿರುವು ಪಡೆದುಕೊಳ್ಳುತ್ತಿರುವಾಗ ಬೆಂಗಳೂರು ಕಡೆಯಿಂದ ಗೌರಿಬಿದನೂರಿಗೆ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿತ್ತು. ಈ ಸಂಬಂಧ ಪುರಠಾಣೆ ಎಸೈ ವಿಜಯಕುಮಾರ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ