ಕಾಡಾನೆ ದಾಳಿ

ಕೋಲಾರ,ಏ.15-ಕಾಡಾನೆ ದಾಳಿ ನಡೆಸಿದ್ದರಿಂದ ರೈತನೊಬ್ಬ ಗಾಯಗೊಂಡಿದ್ದು, ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮಾಲೂರಿನ ದಿನ್ನೂರು ಗ್ರಾಮದ ರೈತ ವೆಂಕಟೆಶ್ ರಾವ್ ಗಾಯಗೊಂಡಿರುವ ರೈತ.
ರಾತ್ರಿ ತಮ್ಮ ಜಮೀನಿನಲ್ಲಿ ನೀರು ಕಟ್ಟಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಈ ವೇಳೆ ವೆಂಕಟೇಶ್ ಅದರಿಂದ ತಪ್ಪಿಸಿಕೊಂಡು ಬಂದಿದ್ದು, ಸಣ್ಣಪುಟ್ಟ ಗಾಯಗಳಾಗಿರುವುದರಿಂದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ