ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಮಾರಸ್ವಾಮಿ ಬಿರುಸಿನ ಪ್ರಚಾರ

ಮೈಸೂರು, ಏ.15-ಈ ಬಾರಿ ತಮ್ಮ ಅಭ್ಯರ್ಥಿ ಜಿ.ಟಿ.ದೇವೇಗೌಡರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿರುವ ಕುಮಾರಸ್ವಾಮಿ ಎರಡನೇ ದಿನವಾದ ಇಂದೂ ಸಹ ಬೆಳಗ್ಗಿನಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಸಿದ್ದಾರೆ.

ಮುಖ್ಯಮಂತ್ರಿಗಳು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಜೆಡಿಎಸ್‍ನಿಂದ ಸ್ಪರ್ಧಿಸಿರುವ ಜಿ.ಟಿ.ದೇವೇಗೌಡರ ಪರವಾಗಿ ಕುಮಾರಸ್ವಾಮಿ ಲಿಂಗಾಂಬುದಿ ಪಾಳ್ಯ, ಶ್ರೀರಾಮಪುರ ಸರ್ಕಲ್, ಹುದ್ನೂರು, ಮಂಡಗಳ್ಳಿ ಸೇರಿದಂತೆ 25ಕ್ಕೂ ಹೆಚ್ಚು ಗ್ರಾಮಗಳಲ್ಲಿ ಇಂದು ಪ್ರಚಾರ ನಡೆಸಿದರು.

ಈ ಹಿಂದೆ ಇದೇ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಬಾರಿ ಕ್ಷೇತ್ರದಾದ್ಯಂತ ಮತ ಪ್ರಚಾರ ನಡೆಸಿದ್ದರು. ಈಗ ಕುಮಾರಸ್ವಾಮಿಯವರು ತಮ್ಮ ಪಕ್ಷದ ಅಭ್ಯರ್ಥಿಪರ 3 ದಿನಗಳ ಕಾಲ ನಿರಂತರವಾಗಿ ಮತ ಬೇಟೆಗೆ ಮುಂದಾಗಿದ್ದಾರೆ.
ಕುಮಾರಸ್ವಾಮಿಯವರು 3 ದಿನಗಳ ಕಾಲ ಮತಪ್ರಚಾರ ನಡೆಸಿ ನಾಳೆ ತೆರಳಲಿದ್ದಾರೆ. ಕುಮಾರಸ್ವಾಮಿ ಇತ್ತ ತೆರಳುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರಕ್ಕಾಗಿ ನಾಳೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಒಟ್ಟಿನಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಈ ಬಾರಿ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ