ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಚಿನ್ನಾಭರಣ ದೋಚಿ ಪರಾರಿ

ಬೆಂಗಳೂರು,ಏ.15- ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೇಗೂರು ಪೆÇಲೀಸ್ ಠಾಣೆ ವಾಪ್ತಿಯಲ್ಲಿ ನಡೆದಿದೆ.
ಬೇಗೂರು ಮಣಿಪಾಲ್‍ಕೌಂಟಿ ರಸ್ತೆ ವಾಟರ್‍ಟ್ಯಾಂಕ್ ಸಮೀಪ ಇರುವ ನವೀನ್ ಅವರ ತಂಗಿ ಶೋಭಾ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.
ರಾತ್ರಿ ಕಳ್ಳರು ಇವರ ಮನೆಯ ಬಾಗಿಲು ಮುರಿದು ಒಳನುಗ್ಗಿ ಚಿನ್ನಾಭರಣ ದೋಚಿದ್ದು, ಎಷ್ಟು ಮೌಲ್ಯದ ವಸ್ತುಗಳು ಅಪಹರಣವಾಗಿದೆ ಎಂಬುದು ತಿಳಿದು ಬಂದಿಲ್ಲ.
ನವೀನ್ ನೀಡಿದ ದೂರಿನ ಮೇರೆಗೆ ಬೇಗೂರು ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ