ಶಿರಗುಪ್ಪ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ್ ರಿಂದ ಸಿಎಂ ಭೇಟಿ

 

ಬೆಂಗಳೂರು, ಏ.16-ಶಿರಗುಪ್ಪ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.
ಹಾಲಿ ಶಾಸಕರಾದ ತಮಗೆ ಟಿಕೆಟ್ ನೀಡದೆ ಇರುವ ಬಗ್ಗೆ ಮುಖ್ಯಮಂತ್ರಿಗಳ ಎದುರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆಯ್ದ ಕ್ಷೇತ್ರಗಳಲ್ಲಿ ಮಾತ್ರ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು? ಹೈಕಮಾಂಡ್ ಟಿಕೆಟ್ ನೀಡಿರುವ ಮುರಳಿಕೃಷ್ಣ ಅವರು ಕ್ಷೇತ್ರದಲ್ಲಿ ಪರಿಚಯಿಸಿಕೊಳ್ಳಬೇಕಾದರೆ ಸಾಕಷ್ಟು ಸಮಯ ಬೇಕು. ಇಂಥಹದ್ದರಲ್ಲಿ ತಮಗೆ ಟಿಕೆಟ್ ತಪ್ಪಿಸಿರುವುದು ಯಾವ ಕಾರಣಕ್ಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ನಾಗರಾಜ್ ಅವರ ಪರವಾಗಿ ಕ್ಷೇತ್ರದಲ್ಲಿ ಹೋರಾಟ ಭುಗಿಲೆದ್ದಿದ್ದು, ನಾಳೆ ಶಿರಗುಪ್ಪ ಬಂದ್‍ಗೆ ಕರೆ ನೀಡಲಾಗಿದೆ. ಪುರಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪುರಸಭೆ ಸದಸ್ಯರು ರಾಜೀನಾಮೆ ನೀಡಿ ನಾಗರಾಜ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ