ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಟಿಕೆಟ್‍ನಿಂದ ವಂಚಿತರಾದ ಗಿರೀಶ್ ಕೆ.ನಾಶಿ ಪರವಾಗಿ ಬೆಂಬಲಿಗರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ

ಬೆಂಗಳೂರು, ಏ.16-ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಟಿಕೆಟ್‍ನಿಂದ ವಂಚಿತರಾದ ಗಿರೀಶ್ ಕೆ.ನಾಶಿ ಪರವಾಗಿ ಬೆಂಬಲಿಗರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ಜನ ಬೆಂಬಲಿಗರು ಕೆಪಿಸಿಸಿ ಕಚೇರಿ ಮುಂದೆ ಜಮಾಯಿಸಿ ಮಹಾಲಕ್ಷ್ಮಿ ಲೇಔಟ್‍ನ ಟಿಕೆಟ್‍ನ್ನು ಮುಖಂಡರು ಮಾರಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಂಜುನಾಥ್ ಅವರು ಕ್ಷೇತ್ರದಲ್ಲಿ ಪರಿಚಯವಿಲ್ಲ. ಆದರೂ ಅವರಿಗೆ ಮಣೆ ಹಾಕಲಾಗಿದೆ. ಟಿಕೆಟ್ ಹಂಚಿಕೆಗೂ ಮುನ್ನ ಕ್ಷೇತ್ರದಲ್ಲಿ ಕಾರ್ಯಕರ್ತರ, ಮುಖಂಡರ ಅಭಿಪ್ರಾಯಕ್ಕೆ ಬೆಲೆ ನೀಡಿಲ್ಲ. ಮನಸೋ ಇಚ್ಛೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊನೆ ಕ್ಷಣದಲ್ಲಿ ಬಿ ಫಾರಂ ಬದಲಾವಣೆ ಮಾಡದೆ ಇದ್ದರೆ ಇನ್ನಷ್ಟು ಉಗ್ರ ಸ್ವರೂಪಕ್ಕೆ ಕೊಂಡೊಯ್ಯುವುದಾಗಿ ಕಾರ್ಯಕರ್ತರು ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವಾಗ ಯಾವುದೇ ಹಿರಿಯ ನಾಯಕರು ಕಾರ್ಯಕರ್ತರ ಅಳಲನ್ನು ಕೇಳದಿದ್ದರಿಂದ ಕಾರ್ಯಕರ್ತರು ಇನ್ನಷ್ಟು ಆಕ್ರೋಶಗೊಂಡರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ