ಸಚಿವ ಡಿ.ಕೆ.ಶಿವಕುಮಾರ್ ಅವರ ಸಾಮ್ರಾಜ್ಯವನ್ನು ಅಧಃಪತನ ಮಾಡಬೇಕೆಂದರೆ ಅವರ ವಿರುದ್ಧ ರೈತ ಪರ ನಾಯಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಿ: ಎಸ್‍ಪಿ ಮುಖಂಡ ಮಾರಸಂದ್ರ ಮುನಿಯಪ್ಪ

ಕನಕಪುರ, ಏ.16-ಕಾಂಗ್ರೆಸ್‍ನ ಪ್ರಭಾವಿ ಮುಖಂಡ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರ ಸಾಮ್ರಾಜ್ಯವನ್ನು ಅಧಃಪತನ ಮಾಡಬೇಕೆಂದರೆ ಅವರ ವಿರುದ್ಧ ರೈತ ಪರ ನಾಯಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಜೆಡಿಎಸ್‍ನಿಂದ ಕಣಕ್ಕಿಳಿಸುವಂತೆ ಬಿಎಸ್‍ಪಿ ಮುಖಂಡ ಮಾರಸಂದ್ರ ಮುನಿಯಪ್ಪ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಡಿಹಳ್ಳಿ ಚಂದ್ರಶೇಖರ್ ಅವರ ಬಳಿ ಹಣವಿಲ್ಲದಿದ್ದರೂ, ಜನಬಲವಿದೆ. ರೈತರ ಹೋರಾಟಗಳಿಗೆ ಬೆಂಬಲವಾಗಿ ನಿಂತು ಹಲವು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಈ ಕ್ಷೇತ್ರದಲ್ಲಿ ರೈತ ಸಮುದಾಯದವರೇ ಹೆಚ್ಚಾಗಿರುವುದರಿಂದ ಅವರಿಗೆ ಮತದಾರರ ಬೆಂಬಲ ಭಾರೀ ಇದೆ. ಹಾಗಾಗಿ ಜೆಡಿಎಸ್‍ನಿಂದ ಬಿ ಫಾರಂ ನೀಡಿದರೆ ಚಂದ್ರಶೇಖರ್ ಅವರು ಗೆಲ್ಲುವ ನಿರೀಕ್ಷೆ ಇದೆ ಎಂದರು.

ಬಿಎಸ್‍ಪಿ ಮತ್ತು ಜೆಡಿಎಸ್ ಹೊಂದಾಣಿಕೆಯಾಗಿರುವುದರಿಂದ ಎರಡೂ ಪಕ್ಷಗಳ ಮತಗಳು ಇವರಿಗೆ ಬೀಳುವ ಸಾಧ್ಯತೆ ಇದೆ. ಹಾಗಾಗಿ ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡುವುದು ಸೂಕ್ತ ಎನ್ನಿಸುತ್ತದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ