ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಯಾವ ಪ್ರಭಾವವನ್ನೂ ಬೀರುವುದಿಲ್ಲ – ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ, ಏ.16- ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಯಾವ ಪ್ರಭಾವವನ್ನೂ ಬೀರುವುದಿಲ್ಲ. ಸ್ವಾಮೀಜಿಗಳು ರಾಜಕೀಯ ಬಿಟ್ಟು ಆಧ್ಯಾತ್ಮಿಕದತ್ತ ಹೆಚ್ಚು ಒತ್ತು ನೀಡುವುದು ಸೂಕ್ತ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಇಂದಿಲ್ಲಿ ಹೇಳಿದ್ದಾರೆ.
ಪಂಚಪೀಠದ ಸ್ವಾಮೀಜಿಯವರಾಗಲಿ ಅಥವಾ ಲಿಂಗಾಯತ ಸ್ವಾಮೀಜಿಯವರಾಗಲಿ ನಿರ್ದಿಷ್ಟವಾದ ಒಂದು ಪಕ್ಷಕ್ಕೆ ಮತ ಹಾಕಿ ಎಂದು ಹೇಳುವುದು ಸರಿಯಲ್ಲ. ಎಲ್ಲ ಸ್ವಾಮೀಜಿಯವರ ಬಗ್ಗೆ ಭಕ್ತರು ಇದ್ದಾರೆ. ಪೂಜ್ಯ ಭಾವನೆ ಇಟ್ಟುಕೊಂಡಿರುತ್ತಾರೆ. ಖಾವಿಧಾರಿಗಳು ಅದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ