ಮುಧೋಳ ಕ್ಷೇತ್ರದಿಂದ ಆರ್.ಬಿ.ತಿಮ್ಮಾಪುರ್ ಅವರಿಗೆ ಕಾಂಗ್ರೆಸ್ ಟಿಕೆಟ್: ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರ ಸಾಮೂಹಿಕ ರಾಜೀನಾಮೆ

ಬೆಂಗಳೂರು, ಏ.17-ಮುಧೋಳ ಕ್ಷೇತ್ರದಿಂದ ಆರ್.ಬಿ.ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡದಿರುವುದನ್ನು ಖಂಡಿಸಿ ಇಂದು ಮುಧೋಳದ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿ ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ನಗರದ ಕಾಂಗ್ರೆಸ್ ಕಚೇರಿ ಬಳಿ ಜಮಾಯಿಸಿದ್ದ 50ಕ್ಕೂ ಹೆಚ್ಚು ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿಯ ಸದಸ್ಯರು ಆರ್.ಬಿ.ತಿಮ್ಮಾಪುರ್ ಅವರಿಗೆ ಮುಧೋಳ ಕ್ಷೇತ್ರದಿಂದ ಟಿಕೆಟ್ ನೀಡಬೇಕಿತ್ತು. ಆದರೆ, ಅವರ ಬದಲಿಗೆ ಸತೀಶ್ ಬಂಡೆವಡ್ಡರ್ ಎಂಬುವವರಿಗೆ ಟಿಕೆಟ್ ನೀಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಬಲ ಅಭ್ಯರ್ಥಿಯಾಗಿದ್ದರೂ ಅವರಿಗೆ ಟಿಕೆಟ್ ನೀಡದಿರುವುದು ಸರಿಯಲ್ಲ. ಮಾಜಿ ಸಚಿವರಾಗಿದ್ದ ಆರ್.ಬಿ.ತಿಮ್ಮಾಪುರ್ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋಲನುಭವಿಸಿದ್ದರು. ಪ್ರಸ್ತುತ ಈ ಕ್ಷೇತ್ರಕ್ಕೆ ನೀಡಿರುವ ಟಿಕೆಟ್‍ಅನ್ನು ಸತೀಶ್ ಬಂಡೆ ವಡ್ಡರ್ ಬದಲಿಗೆ ಆರ್.ಬಿ.ತಿಮ್ಮಾಪುರ್ ಅವರಿಗೆ ನೀಡುವಂತೆ ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ