ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು, ಏ.17- ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಯಲಹಂಕ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯಲಹಂಕ ಸಮೀಪದ ಕೋಗಿಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಿಬಿಎಂಪಿ ಸದಸ್ಯರ ಮನೆ ಹತ್ತಿರ ರಾತ್ರಿ 8 ಗಂಟೆ ಸಮಯದಲ್ಲಿ ಯಾರೋ ಕಾರು ನಿಲ್ಲಿಸಿ ಅದಕ್ಕೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಹೋಗಿದ್ದಾರೆ.

ಕಾರು ಯಾರಿಗೆ ಸೇರಿದ್ದು, ಏತಕ್ಕಾಗಿ ಬೆಂಕಿ ಹಚ್ಚಲಾಗಿದೆ ಎಂಬುದು ಗೊತ್ತಾಗಿಲ್ಲ. ಯಲಹಂಕ ಠಾಣೆ ಪೆÇಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ