ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಿಂದ ತೀವ್ರ ಆಕ್ರೋಶ:

ತುಮಕೂರು, ಏ.18- ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆಯಿಂದ ವರಿಷ್ಠರಿಗೆ ಕಗ್ಗಂಟಾಗಿ ಬಂಡಾಯ ಅಭ್ಯರ್ಥಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸಂಸದ ಮುದ್ದಹನುಮೇಗೌಡರ ಮೇಲೆ ಟಿಕೆಟ್ ಆಯ್ಕೆ ಸಂಬಂಧ ಗಂಭೀರ ಆರೋಪ ಕೂಡ ಕೇಳಿ ಬಂದಿದೆ.
ತುಮಕೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ಹಲವೆಡೆ ಟಿಕೆಟ್ ಅನ್ನು ಮಾರಾಟ ಮಾಡಲಾಗಿದೆ ಎಂದು ಟಿಕೆಟ್ ವಂಚಿತರು ಆರೋಪ ಮಾಡಿದ್ದಾರೆ.
ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಮಾರಾಟ ಮಾಡಲಾಗಿದೆ ಎಂದು ಸಂಸದರ ಮೇಲೆ ಟಿಕೆಟ್ ವಂಚಿತ ಹೊನ್ನಗಿರಿ ಗೌಡ ಅವರು ಆರೋಪಿಸಿದ್ದಾರೆ.
ಹಣ ಪಡೆದು ಟಿಕೆಟ್ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಮುಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಜೆಡಿಎಸ್ ತೊರೆದು ಕಾಂಗ್ರೆಸ್‍ಗೆ ಬಂದವರಿಗೆ ಮನ್ನಣೆ ನೀಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲೇ ಇದ್ದ ನಿಷ್ಠಾವಂತರನ್ನು ಕಡೆಗಣಿಸಲಾಗಿದೆ. ನಾನು ಗುಬ್ಬಿ ಕ್ಷೇತ್ರದಲ್ಲೇ ಕಾಂಗ್ರೆಸ್ ಅನ್ನು ಕಟ್ಟಿ ಬೆಳೆಸಿದವನು. ಆದರೆ ಮೂರು ತಿಂಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಯಾದವರಿಗೆ ಟಿಕೆಟ್ ನೀಡಲಾಗಿದೆ ಎಂದು ಹೊನ್ನಗಿರಿ ಗೌಡ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ