ಡಾ. ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಮಾಜಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಟೇಲ್ ಮಂಜುನಾಥ ಒತ್ತಾಯ:

ಚನ್ನರಾಯಪಟ್ಟಣ, ಏ.18- ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಮಾಜಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಟೇಲ್ ಮಂಜುನಾಥ ಒತ್ತಾಯಿಸಿದ್ದಾರೆ.
ಈ ಹಿಂದೆ ಬಿ.ಜೆ.ಪಿ ಸರ್ಕಾರದ ಸಂದರ್ಭದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ.ಸೋಮಣ್ಣರವರು ಜಿಲ್ಲೆಯ ಅನೇಕ ನೀರಾವರಿ ಯೋಜನೆಗಳಿಗೆ ಬಿ.ಜೆ.ಪಿ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಿದ್ದರು.
ಆದರಲ್ಲಿ ಪ್ರಮುಖವಾದ ಕಾಚೇನಹಳ್ಳಿ ಏತ ನೀರಾವರಿ ಯೋಜನೆ ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಹಿರೀಸಾವೆ ಏತ ನೀರಾವರಿ ಯೋಜನೆಗೆ ಕ್ರಿಯಾ ಯೋಜನೆಯನ್ನು ಸಿದ್ದ ಪಡಿಸಿದ್ದರು. ಇನ್ನೂ ಅನೇಕ ಯೋಜನೆಗಳನ್ನು ಜಿಲ್ಲೆಗೆ ಕೊಡಿಸುವಲ್ಲಿ ಪ್ರಯತ್ನಿಸಿದ್ದರು.
ಅರಸೀಕೆರೆ ಕ್ಷೇತ್ರಕ್ಕೆ ಸೋಮಣ್ಣನವರ ಪುತ್ರರಾದ ವಿ.ಸೋಮಣ್ಣನವರಿಗೆ ಬಿ.ಜೆ.ಪಿ ಪಕ್ಷದಿಂದ ಅಭ್ಯರ್ಥಿ ಮಾಡಿದರೆ ಬಿ.ಜೆ.ಪಿ ಪಕ್ಷಕ್ಕೆ ಗೆಲುವು ಖಚಿತ ಕ್ಷೇತ್ರದಲ್ಲಿ ಬಿ.ಜೆ.ಪಿ ಪರವಾದ ಅಲೆಯಿದ್ದು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಡಾ. ಅರಣ್ ಸೋಮಣ್ಣನವರಿಗೆ ನೀಡುವಂತೆ ಕ್ಷೇತ್ರದ ಅನೇಕ ಬಿ.ಜೆ.ಪಿಯ ಕಾರ್ಯಕರ್ತರು ಹಾಗೂ ಮುಖಂಡರು ಬಿಜೆಪಿ ರಾಜ್ಯಾದ್ಯಕ್ಷರಾದ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ. ಬಿಜೆಪಿಯ ವರಿಷ್ಠರು ಗೆಲ್ಲುವ ಅಭ್ಯಥಿಯಾದ ಡಾ.ಅರುಣ್ ಸೋಮಣ್ಣನವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಅರಸೀಕೆರೆ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಫೆÇ್ರೀ ಅಂಶ ಹೆಚ್ಚಾಗಿದೆ. ಆದ್ದರಿಂದ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಬೇಕಾಗಿದೆ. ಈ ಕಾರಣಕ್ಕೆ ಇಲ್ಲಿ ಬಿಜೆಪಿಯ ಅಭ್ಯರ್ಥಿ ಆಯ್ಕೆಯಾದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ