ಕತುವಾ ಘಟನೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ತೀವ್ರ ವಿಷಾದ :

ಜಮ್ಮು, ಏ.18- ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಕತುವಾದಂತಹ ಘಟನೆಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ತೀವ್ರ ವಿಷಾದ ವ್ಯಕ್ತಪಡಿಸಿರುವ ರಾಷ್ಟ್ರಪತಿ ರಮಾನಾಥ್ ಕೋವಿಂದ್, ಇಂತಹ ಕೆಟ್ಟ ಘಟನೆಗಳು ಮರು ಕಳಿಸದಂತೆ ತಡೆಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದಿದ್ದಾರೆ.
ಜಮ್ಮುವಿನ ಶ್ರೀ ವೈಷ್ಣೋದೇವಿ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾವು ಎಂತಹ ಸಮಾಜವನ್ನು ನಿರ್ಮಾಣ ಮಾಡುತ್ತಿದ್ದೇವೆ ಎಂಬ ಬಗ್ಗೆ ಚಿಂತಿಸಬೇಕಿದೆ. ಕತುವಾದಂತಹ ಘಟನೆಗಳು ಬೇರೆ ಯಾವ ಹೆಣ್ಣು ಮಕ್ಕಳಿಗೂ ಆಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ