ಖಾನಾಪುರ ಶಾಸಕ ಅರವಿಂದ ಪಾಟೀಲ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಹೆಂಡತಿಯ ಕುರಿತು ತಪ್ಪು ಮಾಹಿತಿ :

ಬೆಳಗಾವಿ, ಏ.18-ಮಹಾರಾಷ್ಟ್ರ ಏಕೀಕರಣ ಸಮಿತಿಯ ಖಾನಾಪುರ ಶಾಸಕ ಅರವಿಂದ ಪಾಟೀಲ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಹೆಂಡತಿಯ ಕುರಿತು ತಪ್ಪು ಮಾಹಿತಿ ನೀಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಮಾಹಿತಿ ಹಕ್ಕು ಅಧಿನಿಯಮದಡಿ ಸಿಕ್ಕ ಮಾಹಿತಿಯ ಪ್ರಕಾರ ಕಳೆದ ಚುನಾವಣೆಯಲ್ಲಿ ತನ್ನ ಪತ್ನಿಯ ಬಗ್ಗೆಯೇ ಅರವಿಂದ ಪಾಟೀಲರು ತಪ್ಪು ಮಾಹಿತಿ ನೀಡಿದ್ದು ಬಹಿರಂಗವಾಗಿದೆ.
ಎಂಇಎಸ್ ಮೂಲಕ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕು ಎಂದು ಘೋಷಣೆ ಕೂಗುವ ಶಾಸಕ ಅರವಿಂದ ಪಾಟೀಲರು ತನ್ನ ಪತ್ನಿ ಕರ್ನಾಟಕ ಸರ್ಕಾರದ ಉದ್ಯೋಗಿ ಎನ್ನುವ ಸಂಗತಿಯನ್ನು ಮುಚ್ಚಿಟ್ಟು ಗೃಹಿಣಿ ಎಂದು ಪ್ರಮಾಣ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಹೋರಾಟಗಾರ ಖಾನಾಪುರ ಪೆÇಲೀಸï ಠಾಣೆಯಲ್ಲಿ ಕ್ರಿಮಿನಲï ಮೊಕದ್ದಮೆ ದಾಖಲು ಮಾಡಿದ್ದು, ಈ ಪ್ರಕರಣದ ವಿಚಾರಣೆ ನಡೆಸಿದ ಪೆÇಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಕೂಡ ಸಲ್ಲಿಸಿದ್ದಾರೆ.
ಪತ್ನಿ ಮರಾಠಿ ಶಿಕ್ಷಕಿ!
ಮಹಾರಾಷ್ಟ್ರ ಏಕೀಕರಣ ಸಮಿತಿಯ ಶಾಸಕ ಅರವಿಂದ ಪಾಟೀಲರ ಪತ್ನಿ ಹುಕ್ಕೇರಿ ತಾಲೂಕಿನ ಹಿಟ್ನಿಯ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆಯ ಶಿಕ್ಷಕಿಯಾಗಿ 2007 ಜೂನ್ 13 ರಂದು ಸೇರ್ಪಡೆಗೊಂಡಿದ್ದರು.
ಈಗ ಖಾನಾಪುರ ತಾಲೂಕಿನ ಹಲಸಿ ಗ್ರಾಮದ ಸರ್ಕಾರಿ ಮರಾಠಿ ಶಾಲೆಯ ಟಿಜಿಟಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ತಮ್ಮ ಪತ್ನಿ ಹೆಸರಿನಲ್ಲಿ ಯಾವುದೇ ಖಾತೆ ಇಲ್ಲ ಎಂದು ತಿಳಿಸಿದ್ದಾರೆ. ಆದರೆ ಅವರು ಎಸ್‍ಬಿಐ ಬ್ಯಾಂಕ್ ಮೂಲಕ ವೇತನ ಪಡೆಯುತ್ತಿದ್ದಾರೆ.
ಇವರು ತಮ್ಮ ಖಾಯಂ ವಿಳಾಸವನ್ನು ಅರವಿಂದ ಚಂದ್ರಕಾಂತ ಪಾಟೀಲ, 615, ಸರಾಫ್ ಗಲ್ಲಿ, ನಂದಗಡ, ಖಾನಾಪುರ ಎಂದು ತೋರಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು, ತನಿಖಾಧಿಕಾರಿಗಳು ಮತ್ತು ಪೆÇಲೀಸ್‍ಉಪಾಧೀಕ್ಷಕರು, ಜಿಲ್ಲಾ ಅಪರಾಧ ವಿಭಾಗಕ್ಕೆ ಕಳೆದ ದಿನಾಂಕ 30 ಜನವರಿ 2018 ರಂದು ಬರೆದ ಪತ್ರದಲ್ಲಿ ವಿವರಿಸಿದ್ದಾರೆ.
ಈ ಬಗ್ಗೆ ಆದಾಯ ತೆರಿಗೆ ಇಲಾಖೆಯವರು ವಿಚಾರಣೆ ನಡೆಸಿ ಚುನಾವಣಾ ಆಯೋಗಕ್ಕೆ ವರದಿ ಕಳುಹಿಸಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ನೇರವಾಗಿ ಜಿಲ್ಲಾ ಚುನಾವಣಾಧಿಕಾರಿಗೆ ಮಾಹಿತಿ ರವಾನೆ ಮಾಡಿದ್ದು ಮುಂದಿನ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ